Showing posts with label ಭರತ ಭೂಮಿ....... Show all posts
Showing posts with label ಭರತ ಭೂಮಿ....... Show all posts

Sunday, August 15, 2010

ಸ್ವತಂತ್ರ - ಅತಂತ್ರ


ಆಂಗ್ಲರ ಕಣ್ಣಿಗೆ ಗುರಿಯಾಗಿದ್ದ ಭರತ ಭೂಮಿಯಲಿ
ಸ್ವತಂತ್ರವೇ ಇಲ್ಲದೆ ಕೂಲಿಯಾಳುಗಳಾಗಿದ್ದರು
ತಮ್ಮ ತನವನ್ನೇ ಮರೆತು ಬಾಳು ಸಾಗಿಸುತ್ತಿದ್ದರು
ಅಂದು ಸ್ವತಂತ್ರ ಬರುವ ಮೊದಲು...........

ಸ್ವತಂತ್ರ ಪಡೆಯುವ ದಿಟ್ಟ ಹೆಜ್ಜೆಯಲ್ಲಿ
ಎಷ್ಟೋ ಹಳ್ಳಿಗಳು ಗುಡಿಸಿ ಗುಂಡಾಂತರ
ಜೊತೆಗೆ ಹೆಣ್ಣು ಮಕ್ಕಳಿಗೆ ಹಲವು ಅವಾಂತರ
ಗಂಡು ದಿಕ್ಕಿಲ್ಲದಂತೆ ಬರಡು ಜೀವನ ಮಾಡಿಬಿಟ್ಟಿದ್ದರಂದು.........

ಸ್ವತಂತ್ರ ಪೂರ್ವಾದಿನಗಳು ಕರಿ ನೆರಳಿನಂತೆ
ಸಾಗಿಸಿದ ಅದೆಷ್ಟೋ ಜನಸ್ಥೋಮ
ಒಲವಿನ ಹಸೆಮಣೆಯನ್ನೇ ಮರೆತು
ಸೇಡಿನ ಧಗೆಯಲಿ ಮಿಂದಿದ್ದರು ಅಂದು.....

ಹೆಣ್ಣು ಗಂಡು ಭೇದವಿಲ್ಲದಂತೆ ಹೀನಾಯ ಸ್ಥಿತಿಗೆ ತಳ್ಳಿ
ಆಂಗ್ಲ ದೊರೆಗಳು ರಾಜಠೀವಿಯಲ್ಲಿ ಮೆರೆದರು
ದುಃಖಕೆ ಸ್ಪಂದಿಸದೆ ಕಾಲ್ತುಳಿತಕೆ ಬಿದ್ದ
ಹತಾಷಾ ಜನರ ನೋವು ನರಗಟ್ಟಿದ್ದವಂದು........

ಸ್ವತಂತ್ರದ ಮುನ್ನಾದಿನಗಳ ನೋವಿನ ಕಹಳೆಗೆ
ಜಲಿಯನ್ ವಾಲಾ ಬಾಗ್ ನ ಮಾರಣಹೋಮವೇ
ಸಾಕು ನರಕಯಾತನೆ ಅನುಭವಿಸಿದ ಅಂದಿನ
ಅಮಾಯಕ ಜನರಿಗೆ ನೀಡಿದ ಆಂಗ್ಲರ ಕೊಡುಗೆ.........

ಹೋರಾಟ, ಬಡಿದಾಟ, ಕಾದಾಟ ಯಾವುದಕ್ಕೂ
ಬಗ್ಗದ ಆಂಗ್ಲರಿಗೆ ಕೊನೆಗೊಂದು ಹುಟ್ಟಿತೊಂದು ತಂತ್ರ
ಅದುವೇ ಶಾಂತಿಯುತ ಅಹಿಂಸಾ ಮಾರ್ಗದ ಮಂತ್ರ
ಮಂತ್ರ-ತಂತ್ರದಲೇಗೋ ಮೊಳಗಿತು ಸ್ವತಂತ್ರದ ಕಹಳೆ ...........

ಸ್ವತಂತ್ರ ಬಂದರೇನು ಪ್ರಜಾಪ್ರಭುತ್ವ ಇದ್ದರೇನು
ರಾಜಕೀಯದ ಹೆಸರಲಿ ಆಂಗ್ಲರಿಗಿಂತ ಕೀಳಾಗಿ
ಬಾಳುತಿಹರು ನಾವೇ ಆಯ್ಕೆ ಮಾಡಿದ
ದೇಶ, ರಾಜ್ಯ ಕಾಯುವ ಬದಲು...ನುಂಗೋ ಭಟರು........

ರಾಜಕೀಯದ ದಬ್ಬಾಳಿಕೆಯಲಿ ಬಿದ್ದೇಳುತಿರುವ
ಖಾದಿ ಬಟ್ಟೆಯ ಭ್ರಷ್ಟ ರಾಜಕಾರಣಿಗಳಿಗೆ
ಅಹಿಂಸಾ ಮಾರ್ಗ ಬಿಟ್ಟು ಬೇರಾವ ಮಾರ್ಗ
ಹುಡುಕಿ ತಳಿಸಬೇಕಿದೆಯೋ ತಿಳಿಯದು.........

ಎಂದು ಈ ಭ್ರಷ್ಟತೆ ಹೋಗಿ ನಿಷ್ಟತೆ ಬರುವುದೋ
ಮತ್ತೊಮ್ಮೆ ಗಾಂಧಿಯಂತ ಮಹಾನುಭಾವಿಗಳು
ಹುಟ್ಟಿ ಬರಬೇಕಿದೆ, ಸ್ವತಂತ್ರದ ಹೆಸರಲಿ
ಅತಂತ್ರವನ್ನು ಹೊರದೋಡಿಸ ಬೇಕಿದೆ.......



ಭಾರತ ಭೂಮಿಗೆ ಬ್ರಿಟೀಷರಿಂದ ಸ್ವಾತಂತ್ರ್ಯ ದೊರಕದಿದ್ದರೆ ಚೆನ್ನಾಗಿರುತ್ತಿತ್ತು ಮತ್ತು ಬ್ರಿಟೀಷರ ಆಳ್ವಿಕೆಯಲ್ಲಿಯೇ ನಾವೆಲ್ಲರೂ ಇರಬೇಕಿತ್ತು......?

ಬ್ರಿಟೀಷರ ಆಳ್ವಿಕೆಯಲ್ಲಿದ್ದಿದ್ದರೆ ನಮಗೆ ಹೊರದೇಶದಾದ್ಯಂತ ಒಳ್ಳೆಯ ಮರ್ಯಾದೆ ಇರುತ್ತಿತ್ತು. ನಮ್ಮಗಳಿಗೆಲ್ಲಾ ಬ್ರಿಟೀಷ್ ಪಾಸ್ ಪೋರ್ಟ್ ಸಿಗುತ್ತಿತ್ತು. ಅನುಕೂಲಗಳು ಹೆಚ್ಚಿನವಾಗುತ್ತಿತ್ತು, ಈಗ ನಮ್ಮ ದೇಶದಲ್ಲಿ ಮೋಸ, ವಂಚನೆ,ಧಗ, ಕಳ್ಳತನ, ಕೊಲೆ, ಅತ್ಯಾಚಾರ ಎಲ್ಲವೂ ಮಿತಿಮೀರಿದೆ......... ರಾಜಕೀಯದವರು ಅತಿಯಾಗಿ ವರ್ತಿಸುತ್ತಾರೆ - ಎಂಬುದು ನಮ್ಮ ಸಹದ್ಯೋಗಿಯೊಬ್ಬರ ವಾದ.....

ನಮಗೆ ನಮ್ಮತನ ಎನ್ನುವುದು ಸ್ವತಂತ್ರ ಬಂದಿದ್ದರಿಂದಲೇ ಸಾಧ್ಯ.... ನಮ್ಮನ್ನು ನಾವು ಗುರುತಿಸಿಕೊಳ್ಳಲು ಸ್ವತಂತ್ರವೇ ಸರಿಯಾದ ದಾರಿ...... ಅವರ ಆಳ್ವಿಕೆಯಲಿದ್ದರೆ ನಾವುಗಳು ಕೆಲಸ ಮಾಡಿ ಬ್ರಿಟೀಷರು ಹೆಸರು ತೆಗೆದುಕೊಳ್ಳುತ್ತಲಿದ್ದರು. ಅವರ ಪಾಸ್ ಪೋರ್ಟ್ ನಿಂದ ನಮಗ್ಯಾವುದೇ ಅನುಕೂಲವಾದರೂ ನಮ್ಮ ಸ್ವಂತಿಕೆ ಇರುವುದಿಲ್ಲ. ಎಲ್ಲಾ ದೇಶದಲ್ಲಿ ಮೋಸ ವಂಚನೆ, ಕೊಲೆ ದರೋಡೆ ಇದ್ದೇ ಇರುತ್ತೆ ದೂರದಲ್ಲಿರುವವರಿಗೆ ಕಾಣುವುದಿಲ್ಲ ನಮ್ಮ ದೇಶದ ಬಗ್ಗೆ ನಾವು ಹೆಚ್ಚು ತಿಳಿದುಕೊಳ್ಳುತ್ತೇವೆ ಆದ್ದರಿಂದ ನಮ್ಮ ದೇಶದಲ್ಲೇ ಹೆಚ್ಚು ತಪ್ಪು ನೆಡೆಯೋದು ಎಂದು ತಪ್ಪು ಭಾವಿಸುತ್ತೇವೆ - ಎಂಬುದು ನನ್ನ ವಾದ

ನೀವು ಸಹ ನಿಮ್ಮ ನಿಮ್ಮ ವಾದಗಳನ್ನು ಮಂಡಿಸಿ.... ನಿಮಗೇನನ್ನಿಸುತ್ತೋ ಅದನ್ನು ತಿಳಿಸಿ.....