Showing posts with label ಸ್ನೇಹ ಸಿಂಚನ...ಸ್ನೇಹಿಗಾಗಿ ಈ ಕವನ... Show all posts
Showing posts with label ಸ್ನೇಹ ಸಿಂಚನ...ಸ್ನೇಹಿಗಾಗಿ ಈ ಕವನ... Show all posts

Wednesday, April 8, 2009

ನಿನ್ನ-ಸ್ನೇಹ

ಸ್ನೇಹದ ಹೆಸರಲ್ಲಿ ನೀ ಒಲಿದು ಬಂದೆ
ನಿನ್ನ ಸ್ನೇಹಕೆ ನಾ ಸೋತು ನಿಂದೆ
ಕೆಲವೇ ದಿನವಾದರು ಸ್ನೇಹ
ಅದು ಭದ್ರಬುನಾದಿಯಾಗಿದೆ

ಅದೇಕೊ ಇಷ್ಟುಕಾಲ ಜೊತೆಗಿದ್ದು
ಇಂದು ದೂರ ಸರಿವ ಮಾತಾಡಿದೆ
ನನ್ನ ಮನಕೆ ಚೂರಿ ಚುಚ್ಚಂತಾಯಿತು
ಹೃದಯ ಒಮ್ಮೆಲೆ ಮಮ್ಮಲ ಮರುಗಿತು...

ನಾನೆಲ್ಲೊ ಸೋತೆ ಸ್ನೇಹದ ಆಯ್ಕೆಯಲಿ
ಎಂದು ಭಾವಿಸಿ ಮೂಕಳಾದೆ
ಕಡಲ ಅಲೆಯ ಅಬ್ಬರಕೆ
ಕೊಚ್ಚುಹೋದಂತೆ ಭಾಸವಾಯ್ತು..

ಹೋದ ರಭಸಕೆ ಕಣ್ಣೀರ ಧಾರೆ
ಧರೆಗಿಳಿಸಿ ಭುವಿಯ ತೊಯಿಸಿಬಿಟ್ಟೆ
ಮತ್ತದೆ ಕಡಲ ಅಲೆಯು ನಿನ್ನ
ಭಾಚಿ ತಬ್ಬಿ ನಾನಿರುವ ದಡಕೆ
ತಂದೆಸೆಯಿತು.....

ನೀ ಬಂದಿದ ಕಂಡು ಮನಹಗುರಾಯಿತು
ನೀ ಸಿಗುವುದಿಲ್ಲದ ಮಾತು ಮರೆಮಾಚಿಸಿತು
ಮತ್ತೊಮ್ಮೆ ಹೇಳಿದೆ ಮನವೇಕೋ ಭಾರ
ಕೆಲವರ ಮಾತು ಕೇಳಿ ನಿಂತಿದೆ ಸ್ವರ...

ನೀ ಮಾಡಿದು ತಪ್ಪಲ್ಲವೇ ಸ್ನೇಹಿ
ಗೌಡನ ಮೇಲ್ಲಿದ್ದ ಸಿಟ್ಟನು...
ಗೋಡೆಗೆ ತಟ್ಟಿಬಿಟ್ಟೆಯಲ್ಲಾ...
ಸ್ನೇಹದ ಮನ ಕ್ಷಣದಲೇ ನೋಯಿಸಿಬಿಟ್ಟೆಯಲ್ಲಾ...

ನಿನ್ನ ನೋವೆನಿತಿದ್ದರು ತಿಳಿಸಿಬಿಡು
ನಿನ್ನ ಮನವ ಹಗುರಾಗಲು ಬಿಡು
ನೀನು, ನಾನು ಶಾಶ್ವತವಲ್ಲ ಅಲ್ಲವೆ ...?
ಸ್ನೇಹ ಮಾತ್ರ ಚಿರಾಯು.. ಅದ ಅರಿತುಬಿಡು

ಮತ್ತೆಂದು ದೂರಸರಿವ ಮಾತಾಡದಿರು
ಹೃದಯ ವಿದ್ರಾವಕೆ ಸ್ನೇಹಿಯ ತಳ್ಳದಿರು
ಸ್ನೇಹ ಸಿಂಚನದ ಸಿಹಿ ನೀ ಅರಿತಿರು
ನೀ ಎಂದಿದ್ದರು ಸ್ನೇಹ ಜೀವಿ.. ಅದ ಮರೆಯದಿರು
ಸ್ನೇಹದ ಹೆಸರಲ್ಲಿ ಕೆಲವು ಏರುಪೇರು ನೆಡೆಯುತ್ತವೆ ಸ್ನೇಹ ಕೈಜಾರಿ ಹೋಗಲು ಬಿಡದೆ ಕಾಪಡಿಕೊಳ್ಳಬೇಕು...ಸ್ನೇಹಕ್ಕೆ ಸ್ನೇಹವೇ ಸರಿಸಾಟಿ.....ಮನವೆಂಬ ಮಂಟಪದಿ ಮನುವೆಂಬ ಜೀವಿಯಿರಲು ಅದೇ ನಮಗೆ ಸ್ನೇಹಿ ಆ ಸ್ನೇಹಿಗೆ ಕೈಜೋಡಿಸುವ ಸ್ನೇಹಿ ಸಿಕ್ಕರೆ ಅವರು ಧನ್ಯರು. ಸ್ನೇಹ ಮಾಡುವುದು ನಿಮಿಷದಲ್ಲಿ ಅದ ನಿಭಾಯಿಸುವುದು ಜೀವನಪರ್ಯಂತದಲ್ಲಿ....ಯಾರು ಎಷ್ಟು ನಿಭಾಯಿಸುತ್ತೆವೊ ತಿಳಿಯದು.... ಒಳ್ಳೆ ಸ್ನೇಹಿ ಎಂದು ತಿಳಿದರೆ ಅವರು ನಿಮ್ಮಿಂದ ದೂರಾಗಲು ಬಿಡದಿರಿ....
ಶುಭದಿನ
ಮನಸು...